ಶಿವಮೊಗ್ಗ ಲೈವ್.ಕಾಂ | SAGARA NEWS | 22 ಅಕ್ಟೋಬರ್ 2020
ಸಿಗಂದೂರು ದೇವಸ್ಥಾನದಲ್ಲಿ ಇನ್ಮುಂದೆ ಯಾವುದೇ ಗೊಂದಲಗಳು ಇರುವುದಿಲ್ಲ ಎಂದು ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.
ಬ್ಯಾಕೋಡುವಿನಲ್ಲಿ ಮಾತನಾಡಿದ ರವಿಕುಮಾರ್ ಅವರು, ಸಿಗಂದೂರು ದೇವಸ್ಥಾನದಲ್ಲಿ ಧರ್ಮದರ್ಶಿ ರಾಮಪ್ಪ ಮತ್ತು ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರ ನಡುವಿನ ಗೊಂದಲ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಬಗೆಹರಿದಿದೆ ಎಂದು ಜನರಿಗೆ ತಿಳಿಸಿದರು.
ನವರಾತ್ರಿಯ ಕೊನೆಯ ಎರಡು ದಿನ ಸಿಗಂದೂರು ದೇವಸ್ಥಾನದಲ್ಲಿ ಹೋಮ ನೆರವೇರಿಸಲಾಗುತ್ತದೆ. ಧರ್ಮದರ್ಶಿ ಮತ್ತು ಪ್ರಧಾನ ಅರ್ಚಕರ ಕುಟುಂಬವಷ್ಟೇ ಈ ಕಾರ್ಯದಲ್ಲಿ ಪಾಲ್ಗೊಳ್ಳಲಿದೆ. ಭಕ್ತರಿಗೆ ಅವಕಾಶ ಇರುವುದಿಲ್ಲ ಎಂದು ರವಿಕುಮಾರ್ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]