ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗರಂ ಆಗಿದ್ದ ಭದ್ರಾವತಿ ಎಂಎಲ್ಎ ಈಗ ಕೂಲ್ ಕೂಲ್, ಮುಂದಿನ ನಡೆ ಏನು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 26 ಡಿಸೆಂಬರ್ 2018

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ, ಬೇಸರಗೊಂಡಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ, ತಾಳ್ಮೆಯ ಹಾದಿ ತುಳಿಯಲು ನಿರ್ಧರಿಸಿದ್ದಾರೆ. ಯಾವುದೇ ಕಾರಣಕ್ಕೂ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದಿಲ್ಲ ಅಂತಾ ಖಡಕ್ ಆಗಿ ಹೇಳಿದ್ದ ಅವರೀಗ, ಭೂ ಸೇನಾ ನಿಗಮದ ಅಧ್ಯಕ್ಷರಾಗಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

48421790 761789480849141 2669759878876102656 n.jpg? nc cat=107& nc ht=scontent.fblr1 3

ಕುತೂಹಲ ಮೂಡಿಸಿತ್ತು ಬೆಂಬಲಿಗರ ಸಭೆ

ಮಿನಿಸ್ಟರ್ ಪಟ್ಟ ಸಿಗದೆ ಬೇಸರಗೊಂಡಿದ್ದ ಸಂಗಮೇಶ್ವರ್, ಬೆಂಬಲಿಗರ ಸಭೆ ನಡೆಸಿ, ಮುಂದಿನ ನಡೆಯ ಕುರಿತು ಪ್ರಕಟಿಸುವುದಾಗಿ ಹೇಳಿದ್ದರು. ಈಗ ಬೆಂಬಲಿಗರ ಸಭೆಯಲ್ಲಿ, ತಮ್ಮ ನಿಲುವು ಪ್ರಕಟಿಸಿದ್ದು, ಭೂ ಸೇನಾ ನಿಗಮದ ಅಧ್ಯಕ್ಷ ಸ್ಥಾನ ವಹಿಸಕೊಳ್ಳುವುದಾಗಿ ಹೇಳಿದ್ದಾರೆ.

49009393 761789450849144 473096720738156544 n.jpg? nc cat=110& nc ht=scontent.fblr1 4

ಸಂಗಮೇಶ್ವರ್ ದಿಢೀರ್ ಯು ಟರ್ನ್’ಗೆ ಕಾರಣವೇನು?

BHADRAVATHI MAP 200 X 200

ಶಾಸಕ ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್, ಕಾರ್ಯಕರ್ತರು ಒತ್ತಾಯಿಸಿದ್ದರು. ಈ ಬಾರಿ ಸಂಪುಟ ವಿಸ್ತರಣೆ ಬಗ್ಗೆ ಸಂಗಮೇಶ್ವರ್ ಅವರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಸಂಗಮೇಶ್ವರ್ ಅವರ ಹೆಸರಿದ್ದಿದ್ದು ಅವರನ್ನು ಕೆರಳಿಸಿತ್ತು. ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸಿವುದಾಗಿಯೂ ಘೋಷಿಸಿದ್ದರು. ಕೊನೆಗೆ, ವಿಚಾರ ತಿಳಿಯುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಗಮೇಶ್ವರ್ ಅವರೊಂದಿಗೆ ಮಾತನಾಡಿದ್ದಾರೆ. ಸಮಾಧಾನಪಡಿಸಿ, ಭವಿಷ್ಯದಲ್ಲಿ ಸಚಿವ ಸ್ಥಾನದ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment