ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 19 ಜುಲೈ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಚುನಾಯಿತ ಪ್ರತಿನಿಧಿಗಳು ಪಕ್ಷಾತೀತ ಹೋರಾಟ ನಡೆಸಿ, ಸೈಲ್ ಆಡಳಿತದ ಮೇಲೆ ಒತ್ತಹ ತರಬೇಕಿದೆ. ಇನ್ನು, ಈ ಹೋರಾಟ ಶಿವಮೊಗ್ಗ ಜಿಲ್ಲೆಗೆ ಸೀಮಿತವಾಗಬಾರದು. ಇದು ದೇಶವ್ಯಾಪಿ ಹೋರಾಟವಾಗಬೇಕು. ಲಕ್ಷಾಂತರ ಕೋಟಿ ಬೆಲೆಬಾಳುವ ಕಾರ್ಖಾನೆಯ ಆಸ್ತಿಯನ್ನು ರಾಜ್ಯ ಸರಕಾರ ಕೇವಲ ಒಂದು ರುಪಾಯಿಗೆ ಕೇಂದ್ರ ಸರಕಾರಕ್ಕೆ ನೀಡಿತ್ತು. ಆದರೆ ಇದನ್ನು ಅಭಿವೃದ್ದಿ ಪಡಿಸದೆ ಕೇಂದ್ರ ಸರ್ಕಾರ ಮಾರಾಟಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯಪಟ್ಟಿದ್ದಾರೆ.
ನ್ಯೂಟೌನ್ ಶಾರದಾ ಮಂದಿರದಲ್ಲಿ ವಿಐಎಸ್ಎಲ್ ಕಾರ್ಮಿಕ ಸಂಘ, ಗುತ್ತಿಗೆ ಕಾರ್ಮಿಕ ಸಂಘ ಹಾಗೂ ಯುವ ಬ್ರಿಗೇಡ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಐಎಸ್ಎಲ್ ಸಂವಾದ ಕಾರ್ಯಕ್ರಮದಲ್ಲಿ ಚಕ್ರಮರ್ತಿ ಸೂಲಿಬೆಲೆ ಸಂವಾದ ನಡೆಸಿ ಮಾತನಾಡಿದರು.
ಮೈಸೂರು ಅರಸರು ಮತ್ತು ಸಂಸ್ಥಾಸನದ ದಿವಾನರಾಗಿದ್ದ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪರಿಶ್ರಮದಿಂದ ಸ್ಥಾಪನೆಯಾದ ವಿಐಎಸ್ಎಲ್ ಕಾರ್ಖಾನೆಯನ್ನು ಉಳಿಸಲು ಸಂಘಟಿತ ಪ್ರಯತ್ನ ಮಾಡಬೇಕು ಎಂದರು. ಈ ಬೃಹತ್ ಕಾರ್ಖಾನೆಯನ್ನು ರಾಜ್ಯದ ಎಲ್ಲಾ ಸಂಸದರು ಒಗ್ಗೂಡಿ ಉಳಿಸಬೇಕಾಗಿದೆ.
ಖಾಸಗೀಕರಣಕ್ಕೆ ತಪ್ಪು ಮಾಹಿತಿ ಕಾರಣ
700 ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಕಾರ್ಖಾನೆ ಮತ್ತು ಕಾರ್ಮಿಕರ ವಸತಿಗೃಹಗಳಿಂದ ವಾರ್ಷಿಕವಾಗಿ ಸುಮಾರು 2 ಸಾವಿರ ಕೋಟಿ ಆದಾಯ ಲಭಿಸುತ್ತಿದೆ. ಕಾರ್ಖಾನೆಗೆ ಬಂಡವಾಳ ತೊಡಗಿಸಿ ಆಧುನಿಕ ಯಂತ್ರೋಪಕರಣ ಅಳವಡಿಸಿದರೆ, ಕಾರ್ಖಾನೆ ಲಾಭದಾಯಕವಾಗಿ ನಡೆಯುವುದರಲ್ಲಿಅನುಮಾನವಿಲ್ಲ.
ಆದರೆ ಇತ್ತೀಚಿಗೆ ಕಾರ್ಖಾನೆಗೆ ಭೇಟಿ ನೀಡಿದ್ದ ಕೇಂದ್ರ ಸರ್ಕಾರದ ಅಧಿಕಾರಿಗಳು, ಸೈಲ್ ಆಡಳಿತಕ್ಕೆ ಸರಿಯಾದ ಮಾಹಿತಿ ನೀಡಿಲ್ಲ. ಬಹುಶಃ ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಈ ಸತ್ಯದ ಅರಿವಿಲ್ಲದೆ ಕಾರ್ಖಾನೆಯನ್ನು ಮಾರಾಟ ಮಾಡಲು ಮುಂದಾಗಿರುವ ಸಾಧ್ಯತೆ ಇದೆ ಎಂದರು.
ನಿವೃತ್ತ ಕಾರ್ಮಿಕರ ಸಂಘದ ಮುಖಂಡ ಹನುಮಂತರಾವ್, ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿದರು. ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ವಿಐಎಸ್ಎಲ್ ಕಾರ್ಮಿಕರು ಸಂವಾದದಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





