ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಮೇ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬಂದೋಬಸ್ತ್ ಡ್ಯೂಟಿಗಾಗಿ ಬೆಂಗಳೂರಿಗೆ ಹೋಗಿ ಶಿವಮೊಗ್ಗಕ್ಕೆ ಹಿಂತಿರುಗಿದ್ದ ಮೂವರು ಪೊಲೀಸರಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಮಾಚೇನಹಳ್ಳಿಯ ಕೆಎಸ್ಆರ್ಪಿ ಬೆಟಾಲಿಯನ್ನಲ್ಲಿ ಆತಂಕ ಸೃಷ್ಟಿಯಾಗಿದೆ.
ಯಾವೆಲ್ಲ ಪೊಲೀಸರಿಗೆ ಕರೋನ ಪಾಸಿಟವ್ ಬಂದಿದೆ?
ಪಿ2830 – 23 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು
ಪಿ2852 – 23 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು
ಪಿ2882 – 29 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು
54 ಜನರು ಒಟ್ಟಿಗೆ ಮರಳಿದ್ದರು
ಮಾಚೇನಹಳ್ಳಿಯ ಜಯಂತಿ ಗ್ರಾಮದಲ್ಲಿರುವ ಕೆಎಸ್ಆರ್ಪಿ ಬೆಟಾಲಿಯನ್ನಿಂದ 54 ಮಂದಿ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಬಂದೋಬಸ್ತ್ ಡ್ಯೂಟಿ ಮುಗಿಸಿ ಬಸ್ನಲ್ಲಿ ಹಿಂತಿರುಗಿದ್ದರು. ಈ ಪೈಕಿ ಮೂವರಲ್ಲಿ ಸೋಂಕು ಪತ್ತೆಯಾಗಿದ್ದು, ಕೂಡಲೆ ಅವರನ್ನು ಚಕಿತ್ಸೆಗೆ ಒಳಪಡಿಸಲಾಗಿದೆ.
ಪ್ರೈಮರಿ ಕಾಂಟ್ಯಾಕ್ಟ್ ಎಷ್ಟು ಗೊತ್ತಾ?
ಮೂವರು ಕಾನ್ಸ್ಟೇಬಲ್ಗಳಿಗೆ ಕರೋನ ಪಾಸಿಟಿವ್ ಬಂದಿರುವ ಹಿನ್ನೆಲೆ ಪ್ರಾಥಮಿಕ ಮತ್ತು ಸಕೆಂಡರಿ ಕಾಂಟ್ಯಾಕ್ಟ್ಗಳನ್ನು ಪತ್ತೆ ಹಚ್ಚಲಾಗಿದೆ. 54 ಸಿಬ್ಬಂದಿಗಳ ಪೈಕಿ 15 ಜನರನ್ನು ಪ್ರಾಥಮಿಕ ಸಂಪರ್ಕ ಎಂದು ಗುರುತಿಸಲಾಗಿದೆ. 36 ಮಂದಿಯನ್ನು ದ್ವಿತೀಯ ಸಂಪರ್ಕ ಎಂದು ಗುರುತಿಸಿ ಆರೋಗ್ಯ ಪರಿಶೀಲನೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






