| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ವಿಶೇಷ ತನಿಖಾ ತಂಡ (ಎಸ್ಐಟಿ) ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದು, ಕಾನೂನು ಚೌಕಟಿನಲ್ಲಿ ಕೆಲಸ ನಿರ್ವಹಿಸುತ್ತಿದೆ. ಹಾಗಾಗಿ ಯಾರೊಬ್ಬರು ಎಸ್ಐಟಿ ಹೀಗೆ ಕೆಲಸ ಮಾಡಬೇಕು, ಹಾಗೆ ಮಾಡಬೇಕು ಎಂದು ಟೀಕೆ ಟಿಪ್ಪಣಿ ಮಾಡಬಾರದು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ ಪ್ರವೀಣ್ ಸೂದ್, ಎಸ್ಐಟಿ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ಬೆಂಗಳೂರು ಕಮಿಷನರ್ ಅವರು ಈಗಾಗಲೇ ಮಾಧ್ಯಮಗಳಿಗೆ ತಿಳಸುತ್ತಿದ್ದಾರೆ. ಎಸ್ಐಟಿ ತನಿಖೆಯ ಬಗ್ಗೆ ನ್ಯಾಯಾಲಯ ಮಾಹಿತಿ ಕೇಳಿದೆ. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.
ಸದ್ಯದಲ್ಲೇ ಚಾರ್ಚ್ ಶೀಟ್
ಶಿವಮೊಗ್ಗದ ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ ಸದ್ಯದಲ್ಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ. ಆಗ ಸ್ಪೋಟದ ಕುರಿತು ಸಂಪೂರ್ಣ ಮಾಹಿತಿ ಸಾರ್ವಜನಿಕವಾಗಿ ಲಭ್ಯವಾಗಲಿದೆ ಎಂದರು.
ಇದನ್ನೂ ಓದಿ | ಶಿವಮೊಗ್ಗಕ್ಕೆ ಪೊಲೀಸ್ ಮಹಾನಿರ್ದೇಶಕರ ಭೇಟಿ, ಮಹತ್ವದ ಮೀಟಿಂಗ್
ಇನ್ನು, ಶಿವಮೊಗ್ಗದಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪನೆ ವಿಚಾರದಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಯಾವುದೆ ನಗರದಲ್ಲಿ ಹತ್ತು ಲಕ್ಷ ಜನಸಂಖ್ಯೆ ಇದ್ದರಷ್ಟೇ ಕಮಿಷನರೇಟ್ ಸ್ಥಾಪನೆ ಮಾಡಲಾಗುತ್ತದೆ. ಶಿವಮೊಗ್ಗದಲ್ಲಿ ಕಮಿಷನರೇಟ್ ಸ್ಥಾಪನೆ ವಿಚಾರ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಪ್ರವೀಣ್ ಸೂದ್ ತಿಳಿಸಿದರು
ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್
ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಿರುವ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು, ಡಿಎಆರ್ ಸಭಾಂಗಣದಲ್ಲಿ ಮಹತ್ವದ ಮೀಟಿಂಗ್ ನಡೆಸಿದರು. ಪೂರ್ವ ವಲಯ ಐಜಿಪಿ ರವಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಜಿಲ್ಲೆಯ ಡಿವೈಎಸ್ಪಿಗಳು, ಇನ್ಸ್ಪೆಕ್ಟರ್ಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.






ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()