ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 22 ಫೆಬ್ರವರಿ 2019
ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿಯಾಗಿ ಡಾ.ಅಶ್ವಿನಿ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಭಿನವ್ ಖರೆ ಅವರು ಡಾ.ಅಶ್ವಿನಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ಶಿವಮೊಗ್ಗದ ಮೊದಲ ಮಹಿಳೆ ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದಾರೆ.

ಇದಕ್ಕೂ ಮೊದಲು, ನೂತನ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಜಿಲ್ಲಾ ಪೊಲೀಸ್ ವತಿಯಿಂದ ಗಾರ್ಡ್ ಆಫ್ ಹಾನರ್ ನೀಡಲಾಯಿತು.
ಕ್ರೈಂ ಕಂಟ್ರೋಲ್ ಮಾಡುವುದೇ ಗುರಿ
ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನೂತನ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಶಿವಮೊಗ್ಗ ಜಿಲ್ಲೆ ಸಾಹಿತ್ಯಕ್ಕೆ ಹೆಸರಾಗಿದೆ. ಹಾಗೆಯೇ, ಇಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಇದನ್ನು ನಿಯಂತ್ರಿಸುವುದೇ ತಮ್ಮ ಗುರಿ ಎಂದು ಸ್ಪಷ್ಟಪಡಿಸಿದರು.

ತಪ್ಪಿತಸ್ಥರ ಬಗ್ಗೆ ಮೆಸೇಜ್ ಮಾಡಿದರೆ ಸಾಕು
ಇನ್ನು, ಅಪರಾಧ ಚಟುವಟಿಕೆ ನಿಯಂತ್ರಣಕ್ಕೆ, ಶಿವಮೊಗ್ಗದ ಸಾರ್ವಜನಿಕರ ನೆರವು ಅಗತ್ಯ ಅಂತಾ ತಿಳಿಸಿದ ಎಸ್.ಪಿ ಡಾ.ಅಶ್ವಿನಿ, ಅಪರಾಧ ಪ್ರಕರಣಗಳ ಕುರಿತು ಸಾರ್ವಜನಿಕರು ತಮ್ಮ ಮೊಬೈಲ್’ಗೆ ಮೆಸೇಜ್ ಕಳುಹಿಸಿದರೆ ಸಾಕು. ಹೆಸರು ಹೇಳುವ ಅಗತ್ಯವೇ ಇಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.







ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





