ಶಿವಮೊಗ್ಗ ಲೈವ್.ಕಾಂ | 26 ಡಿಸೆಂಬರ್ 2018
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಎಲ್ಲೆಂದರಲ್ಲಿ ಬಿದ್ದಿದ್ದ ಕಸ. ಇಲ್ಲಿಗೆ ಬಂದವರಿಗೆ ಕಾಡುತ್ತಿತ್ತು ಸಾಂಕ್ರಾಮಿಕ ರೋಗದ ಆತಂಕ. ಆಸ್ಪತ್ರೆ ಎದುರಲ್ಲೇ ಇತ್ತು ಕಾಯಿಲೆಗಳ ಕಾರ್ಖಾನೆ..!
ಇದು ಭದ್ರಾವತಿಯ ವಿಐಎಸ್ಎಲ್ ಆಸ್ಪತ್ರೆ ಮುಂಭಾಗದ ಬಸ್ ತಂಗುದಾಣದ ದುಸ್ಥಿತಿ. ಎಲ್ಲೆಂದರಲ್ಲಿ ಕಸದ ರಾಶಿ, ಸುತ್ತಲು ಬೆಳೆದಿದ್ದ ಗಿಡಗಂಟಿಯಿಂದಾಗಿ, ಹಂದಿಗಳ ವಾಸ ಸ್ಥಾನವಾಗಿತ್ತು. ಅಕ್ರಮ ಚಟುವಟಿಕೆಗೆ ಈ ತಂಗುದಾಣ ಆಶ್ರಯ ತಾಣದಂತಾಗಿತ್ತು. ಇದೇ ಕಾರಣಕ್ಕೆ, ಈ ಬಸ್ ತಂಗುದಾಣದ ಬಳಿಗೆ ಬರಲು ಜನರು ಹೆದರುತ್ತಿದ್ದರು. ಆದರೆ ಕಳೆದೆರಡು ದಿನದಿಂದ, ಜನರು ನೆಮ್ಮದಿಯಿಂದ ತಂಗುದಾಣಕ್ಕೆ ಬಂದು ನಿಲ್ಲುತ್ತಿದ್ದಾರೆ. ಸ್ಕೂಲ್ ಮಕ್ಕಳು ಬಸಿಗೆ ಕಾಯಲು ಈ ತಂಗುದಾಣ ಬಳಸುತ್ತಿದ್ದಾರೆ.

ದಿಢೀರ್ ಹೊಸ ರೂಪ ಪಡೆಯಿತು ತಂಗುದಾಣ
ವಿಐಎಸ್ಎಲ್ ಆಸ್ಪತ್ರೆ ಮುಂಭಾಗದ ಬಸ್ ನಿಲ್ದಾಣಕ್ಕೆ ಈಗ ಹೊಸ ರೂಪ ಬಂದಿದೆ. ಕಸದ ರಾಶಿ ಮಾಯವಾಗಿದೆ. ಹಂದಿ, ಬೀದಿ ನಾಯಿಗಳ ಉಪಟಳವಿಲ್ಲ. ಗಿಡಿಗಂಟಿ ಕಣ್ಮರೆಯಾಗಿದ್ದು, ಶಿಥಿಲವಾಗಿದ್ದ ಬಸ್ ನಿಲ್ದಾಣ ಸುಣ್ಣ, ಬಣ್ಣ ಬಳಿದುಕೊಂಡು ಕಂಗೊಳಿಸುತ್ತಿದೆ. ಈ ಬಸ್ ನಿಲ್ದಾಣಕ್ಕೆ ಹೊಸ ರೂಪ ಕೊಟ್ಟಿದ್ದು, ಭದ್ರಾವತಿಯ ಯುವ ಬ್ರಿಗೇಡ್’ನ ಕಾರ್ಯಕರ್ತರು.
ನಿತ್ಯ ಇಲ್ಲಿ ನೂರಾರು ಜನರು ಬಸ್’ಗೆ ಕಾಯುತ್ತಾರೆ. ಬಸ್ ಸ್ಟಾಪ್ ಇದ್ದರೂ ಬಳಸಲು ಯೋಗ್ಯವಾಗಿರಲಿಲ್ಲ. ಯುವ ಬ್ರಿಗೇಡ್ ಕಾರ್ಯಕರ್ತರ ಶ್ರಮದಾನ, ಜನರು ನಿರಮ್ಮಳವಾಗಿ ಈ ಬಸ್ ಸ್ಟಾಪ್ ಬಳಕೆಗೆ ಅವಕಾಶ ಕಲ್ಪಿಸಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






