ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020
ಮತದಾರರಿಗೆ ಹಂಚಲು ಪಲಾವ್ ರೆಡಿ ಮಾಡುತ್ತಿದ್ದ ತೋಟದ ಮನೆ ಮೇಲೆ ಚುನಾವಣಾ ನೀತಿ ಸಂಹಿತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪದ ಹೊಸಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದೆ.
ಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಪಲಾವ್ ಹಂಚಲು ರೆಡಿ ಮಾಡಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ದಾಳಿ ನಡೆಸಿದರು.
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಪಲಾವ್ ಮಾಡಲು ಬಳಸಿದ್ದ ಪಾತ್ರೆಗಳು, ರೆಡಿಯಾಗಿದ್ದ ಪಲಾವ್, ಆಹಾರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಪಲಾವ್ ರೆಡಿ ಮಾಡುತ್ತಿದ್ದವರು ಪರಾರಿಯಾಗಿದ್ದಾರೆ.
200ಕ್ಕೂ ಹೆಚ್ಚು ಜನರಿಗೆ ಪಲಾವ್, ಮೊಸರು ಬಜ್ಜಿ ರೆಡಿ ಮಾಡಿಸಲಾಗಿತ್ತು. ಊಟ ತಯಾರಿಸಿದ ಅಭ್ಯರ್ಥಿಯ ಯಾರು ಅನ್ನುವುದು ತಿಳಿದು ಬಂದಿಲ್ಲ. ಈ ಸಂಬಂದ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾಧಿಕಾರಿ ಚಂದ್ರಪ್ಪ ತಿಳಿಸಿದ್ದಾರೆ.
VIDEO REPORT
ದಾಳಿಯಲ್ಲಿ ಚುನಾವಣಾಧಿಕಾರಿ ಚಂದ್ರಪ್ಪ, ಇಒ ಡಾ.ಕಲ್ಲಪ್ಪ ಸೇರಿದಂತೆ ಇತರರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200