ಮತ್ತೊಮ್ಮೆ ಜಪ್ತಿಯಾಯ್ತು ಸಾಗರ ಉಪ ವಿಭಾಗಾಧಿಕಾರಿ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 22 ಮಾರ್ಚ್ 2019

ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ, ನ್ಯಾಯಾಲಯದ ಆದೇಶದಂತೆ ಸಾಗರ ಉಪ ವಿಭಾಗಾಧಿಕಾರಿ ಕಾರನ್ನು ಜಪ್ತಿ ಮಾಡಲಾಗಿದೆ. ಶಿಕಾರಿಪುರದ ಅಂಬ್ಲಿಗೊಳ ಜಲಾಶಯದ ಕೋಡಿ ಮತ್ತು ಏರಿ ಎತ್ತರಿಸುವ ಯೋಜನೆ ಸಂಬಂಧ ಸಾಗರ ತಾಲೂಕಿನ ರೈತರಿಗೆ ನೀಡಬೇಕಾದ ಹೆಚ್ಚುವರಿ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಲಾಗಿತ್ತು.

53563438 572680866545161 8912588594158239744 n.jpg? nc cat=111& nc oc=AQkrTjsZO1qX9Zrt46Pw0cS 0Vh9CjF6rjphs4WppfKM n3WNvlwINcp dWY0CPm3AvV0hVXFGtrHaMaP QgU85y& nc ht=scontent.fixe1 1

ಈ ಕಾಮಗಾರಿಯಿಂದ ಸಾಗರ ತಾಲೂಕಿನ ಆನಂದಪುರ ಹೋಬಳಿಯ ನಾಡವಳ್ಳಿ, ಗೌತಮಪುರ, ಭೈರಾಪುರ, ಕುಡಿಗೆರೆ ಗ್ರಾಮದ 22 ರೈತರಿಗೆ ಸಂಬಂಧಿಸಿದ ಜಮೀನುಗಳನ್ನು 2007 – 08ರಲ್ಲಿ ಭೂ ಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ ಪರಿಹಾರ ನೀಡಲು ವಿಳಂಬ ಮಾಡಿದ್ದರಿಂದ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.

ಜಪ್ತಿಯಾಯ್ತು ಎಸಿ ಕಾರು

ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಸಂಬಂಧ 2018ರ ಆಗಸ್ಟ್ 18ರಂದು ತೀರ್ಪು ನೀಡಿದ್ದ ನ್ಯಾಯಾಲಯ 22 ರೈತರಿಗೆ 31,88,643 ರೂ. ಪರಿಹಾರ ನೀಡುವಂತೆ ಸೂಚಿಸಿತ್ತು. ಆದರೆ ಶಿಕಾರಿಪುರದ ಕರ್ನಾಟಕ ನೀರಾವರಿ ನಿಗಮದ ದಂಡಾವತಿ ಯೋಜನಾ ವಿಭಾಗದ ಕಾರ್ಯಪಾಲಕ ಅಭಿಯಂತರರು ಈವರೆಗೂ ಪಾಲಿಸಿರಲಿಲ್ಲ. ಹಾಗಾಗಿ ಉಪ ವಿಭಾಗಾಧಿಕಾರಿ ಕಾರನ್ನೇ ಜಪ್ತಿ ಮಾಡುವಂತೆ ಕೋರ್ಟ್ ಸೂಚಿಸಿತು.

Sagara Court General Image 1 1

ಕಾರು ಜಪ್ತಿ ಇದೇ ಮೊದಲ್ಲಲ್ಲ

ಸಾಗರ ಎಸಿ ಕಾರು ಜಪ್ತಿ ಆಗುತ್ತಿರುವುದು ಇದೇ ಮೊದಲಲ್ಲ. ಮರಳು ತೆಗೆಯಲು ನಿಷೇಧ ಹೇರಿದ ಪ್ರಕರಣ ಸಂಬಂಧ, ದಂಡ ಕಟ್ಟಲು ವಿಳಂಬ ಮಾಡಿದ್ದಕ್ಕೆ, ಕಳೆದ ವರ್ಷ ಸಾಗರ ಎಸಿ ಕಾರು ಜಪ್ತಿ ಮಾಡಲಾಗಿತ್ತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment