ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 14 ಜನವರಿ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

2019 readers copy new

ಸ್ಮಾರ್ಟ್ ಸಿಟಿ ಯೋಜನೆಗಾಗಿ ಮಸೋಯಿಚ್ಛೆ ಮರಗಳನ್ನು ಕಡಿಯಲಾಗುತ್ತಿದೆ. ಇದಕ್ಕೆ ಅನುಮತಿ ನೀಡುತ್ತಿರುವ ವಲಯ ಅರಣ್ಯಾಧಿಕಾರಿಯನ್ನು ಕೂಡಲೇ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ವತಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.

https://www.facebook.com/liveshivamogga/videos/853414645092210/

ಸಾಗರ ರಸ್ತೆಯ ಪ್ರವಾಸಿ ಮಂದಿರದ ಮುಂದೆ ಮರ ಕಡಿಯಲು ಅನುಮತಿ ನೀಡಲಾಗಿತ್ತು. ಆದರೆ ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಕಾರ್ಯಕರ್ತರು, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ರೆಂಬೆ ಕತ್ತರಿಸಿದ ಮರದ ಕೆಳಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮರ ಕಡಿಯಲು ಅನುಮತಿ ನೀಡಿದ ಶಿವಮೊಗ್ಗ ನಗರದ ವಲಯ ಅರಣ್ಯಾಧಿಕಾರಿ ಜಯೇಶ್ ಅವರನ್ನು ವರ್ಗಾವಣೆ ಮಾಡುವವರೆಗು ಉಪವಾಸ ನಡೆಸಲಾಗುತ್ತದೆ ಎಂದು ಆಂದೋಲನದ ಪ್ರಮುಖರು ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಗಾಗಿ ಶಿವಮೊಗ್ಗ ನಗರದ ವಿವಿಧೆಡೆ ಮರಗಳನ್ನು ಕಡಿಯಲಾಗುತ್ತಿದೆ. ಅನಗತ್ಯವಾಗಿ ಮರಗಳನ್ನು ಕಡಿಯುತ್ತಿರುವುದಕ್ಕೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತ ಶಿವಮೊಗ್ಗ ನಂದನ್, ಬಾಲಕೃಷ್ಣ, ಶಿವಕುಮಾರ್ ಸೇರಿದಂತೆ ಹಲವರು ಉಪವಾಸದಲ್ಲಿ ಪಾಲ್ಗೊಂಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment