| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | 17 ಡಿಸೆಂಬರ್ 2018
ಭದ್ರಾವತಿ ಉದ್ಧಾಮ ಕ್ಷೇತ್ರದ ಬಳಿ ಚಿರತೆ ಕಾಣಿಸಿಕೊಂಡಿದೆ..! ಗಂಗೂರು ರಸ್ತೆಯಲ್ಲಿ ಚಿರತೆ ನೋಡಿ ಬೆಚ್ಚಿಬಿದ್ದ ಜನ..! ಬೈಕ್’ನಲ್ಲಿ ಓಡಾಡುತ್ತಿದ್ದವರು, ಜೀವ ರಕ್ಷಣೆಗಾಗಿ ಮರ ಹತ್ತಿ ತಪ್ಪಿಸಿಕೊಂಡರು..! ಹೀಗಂತಾ ಎರಡು ದಿನದಿಂದ ವಾಟ್ಸಪ್, ಫೇಸ್’ಬುಕ್’ನಲ್ಲಿ ಮೆಸೇಜ್’ಗಳು ಹರಿದಾಡುತ್ತಿವೆ.
ಭದ್ರಾವತಿಯ ಗಂಗೂರು ಗ್ರಾಮದ ಉದ್ಧಾಮ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪ್ರತೀ ದಿನ ಭಕ್ತರು ತಂಡೋಪ ತಂಡವಾಗಿ ಹೋಗಿ ಬರುತ್ತಾರೆ. ದಟ್ಟ ಅರಣ್ಯದ ನಡುವೆ, ಪ್ರಶಾಂತ ವಾತಾವರಣದಲ್ಲಿರುವ ದೇಗುಲದಲ್ಲಿ, ಹುಣ್ಣಿಮೆ ದಿನ ವಿಶೇಷ ಪೂಜೆ, ಹೋಮಗಳಿರುತ್ತವೆ. ಅವತ್ತು ಭಾರೀ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಇದೇ ದೇವಸ್ಥಾನದ ಬಳಿಯೇ ಚಿರತೆ ಕಾಣಿಸಿಕೊಂಡಿದೆ ಅಂತಾ ವಾಟ್ಸಪ್’ನಲ್ಲಿ ಈಗ ಮೆಸೇಜುಗಳ ಫಾರ್ವರ್ಡ್ ಆಗುತ್ತಿವೆ.

ಆದರೆ ಅಸಲಿ ವಿಚಾರವೇ ಬೇರೆ..!
ಚಿರತೆ ಕಾಣಿಸಿಕೊಂಡಿರುವುದು ಉದ್ಧಾಮ ಆಂಜನೇಯ ದೇವಸ್ಥಾನದ ಬಳಿಯಲ್ಲ. ಅಸಲಿಗೆ, ಈ ಫೋಟೊ ಶಿವಮೊಗ್ಗ ಜಿಲ್ಲೆಯದ್ದೇ ಅಲ್ಲ. ಇದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಖಚಿತಪಡಿಸಿದ್ದಾರೆ.

ಅಂದಹಾಗೆ, ಚಿರತೆ ಪ್ರತ್ಯಕ್ಷವಾಗಿ, ಜನರು ಭಯಭೀತಿಗೊಂಡು ಮರ ಹತ್ತಿದ್ದ ಫೋಟೊ ಉತ್ತರ ಕರ್ನಾಟಕ ಭಾಗದ್ದು. ಬೆಳಗಾವಿ ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ನಡೆದ ಘಟನೆ ಎಂದು ಹೇಳಲಾಗುತ್ತಿದೆ. ಆದರೆ ಭದ್ರಾವತಿ ಉದ್ಧಾಮ ಕ್ಷೇತ್ರದ ರಸ್ತೆಯೆಂದು ವಾಟ್ಸಪ್’ನಲ್ಲಿ ಹರಿದಾಡುತ್ತಿರುವುದರಿಂದ, ಜನ ಆತಂಕಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()