ಶಿವಮೊಗ್ಗ ಲೈವ್.ಕಾಂ | SHIMOGA NEWS | 5 NOVEMBER 2020
ಹಳೆ ಬಾಕ್ಸ್ ಚರಂಡಿ ತೆರವುಗೊಳಿಸದೆ, ರಸ್ತೆ ಜಾಗವನ್ನು ಒತ್ತುವರಿ ಮಾಡಿಕೊಂಡು ಹೊಸ ಬಾಕ್ಸ್ ಚರಂಡಿ ನಿರ್ಮಿಸುತ್ತಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಕ್ರಮಕ್ಕೆ ಅಶೋಕನಗರ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ, ಅಧಿಕಾರಿಗಳ ವಿರುದ್ಧ ಗರಂ ಆದರು.
ಅಮೃತ್ ಯೋಜನೆ ಅಡಿಯಲ್ಲಿ ಅಶೋಕ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಿಸಲಾಗುತ್ತಿದೆ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಚರಂಡಿ ನಿರ್ಮಿಸಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಕ್ವಾರ್ಟರ್ಸ್ ಬೇಲಿ ಉಳಿಸಲು ಯತ್ನ
ಹಳೆಯ ಬಾಕ್ಸ್ ಚರಂಡಿಗೆ ಹೊಂದಿಕೊಂಡಂತೆ ಹೊಸ ಬಾಕ್ಸ್ ಚರಂಡಿ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಒಂದೂವರೆ ಅಡಿಯಷ್ಟು ರಸ್ತೆಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಕ್ವಾರ್ಟರ್ಸ್ನ ಬೇಲಿಯನ್ನು ಉಳಿಸುವ ಸಲುವಾಗಿ ಹೀಗೆ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಾಜಿ ಎಂಎಲ್ಎ ಭೇಟಿ, ಗರಂ
ವಿಚಾರ ತಿಳಿಯುತ್ತಿದ್ದಂತೆ ಕಾಮಗಾರಿ ಸ್ಥಳಕ್ಕೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ನ್ಯೂನತೆಗಳು ಇರುವುದನ್ನು ಗಮನಿಸಿ ಪಾಲಿಕೆ ಕಮಿಷನರ್ ಅವರಿಗೆ ದೂರವಾಣಿ ಮೂಲಕ ವಿಚಾರ ತಿಳಿಸದರು. ಅಲ್ಲದೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200