ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಗಣಿಯಲ್ಲಿದ್ದ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿದೆ. ಇಲ್ಲಿ ಕಾರ್ತವ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೆಲ್ಲ ಹೊರ ರಾಜ್ಯದವರಾಗಿದ್ದಾರೆ.
ಕಲ್ಲು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದವರೆಲ್ಲ ಬಿಹಾರ, ಅಸ್ಸಾಂ ಮೂಲದವರು ಎಂದು ಹೇಳಲಾಗುತ್ತಿದೆ. ಆದರೆ ಯಾರೊಬ್ಬರ ದೇಹಗಳನ್ನು ಗುರುತಿಸಲಾಗದ ಸ್ಥಿತಿ ಇದೆ.
ಸ್ಥಳೀಯರು ಕೆಲಸ ಮಾಡುತ್ತಿರಲಿಲ್ಲ
ಗಣಿಗಾರಿಕೆಗೆ ಸ್ಥಳೀಯರ ವಿರೋಧವಿದೆ ಹಾಗಾಗಿ ಸ್ಥಳೀಯರನ್ನು ಇಲ್ಲಿ ಕೆಲಸಕ್ಕೆ ಬಳಸಿಕೊಳ್ಳುತ್ತಿರಲಿಲ್ಲ. ಹೊರ ರಾಜ್ಯದಿಂದ ಹಲವರನ್ನು ಇಲ್ಲಿ ಕರೆಯಿಸಿಕೊಂಡು ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು. ಕಾರ್ಮಿಕರಿಗೆ ಇಲ್ಲಿಯೇ ಶೆಡ್ಗಳನ್ನು ನಿರ್ಮಿಸಲಾಗಿತ್ತು. ಸ್ಥಳೀಯರ ಜೊತೆಗೆ ಹೆಚ್ಚಿಗೆ ಬೆರೆಯುತ್ತಿರಲಿಲ್ಲ. ಆದ್ದರಿಂದ ಎಷ್ಟು ಮಂದಿ ಇಲ್ಲಿದ್ದರು ಎಂಬ ನಿಖರ ಮಾಹಿತಿ ತಿಳಿಯುತ್ತಿರಲಿಲ್ಲ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]