ಶಿವಮೊಗ್ಗದ ಲೈವ್.ಕಾಂ | RIPPONPETE NEWS | 15 ಫೆಬ್ರವರಿ 2022
ರಾತ್ರೋರಾತ್ರಿ ದೇವಸ್ಥಾನ ಒಂದರ ಬೀಗ ಮುರಿದು ಹುಂಡಿ ಕಳವು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಸಮೀಪದ ಕೋಡೂರಿನ ಮುತ್ತಲ ಗ್ರಾಮದ ಹೊಸಹಳ್ಳಿ ಕೋಟೆ ಈಶ್ವರ ದೇವಸ್ಥಾನದ ಬೀಗ ಮುರಿದು ಹುಂಡಿ ಕಳವು ಮಾಡಲಾಗಿದೆ. ಶುಕ್ರವಾರ ರಾತ್ರಿ ಕಳ್ಳರು ದೇವಸ್ಥಾನದ ಬಾಗಿಲ ಬೀಗ ಮುರಿದು ಒಳನುಗ್ಗಿದ್ದು ಹುಂಡಿಯಲ್ಲಿದ್ದ ಹಣ ಹೊತ್ತೊಯ್ದಿದ್ದಾರೆ.
ಈ ಬಗ್ಗೆ ದೇವಸ್ಥಾನದ ಅಧ್ಯಕ್ಷ ಬಸವರಾಜ ಗೌಡ ನೀಡಿದ ದೂರಿನ ಮೇರೆಗೆ ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.