ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ಮರ ಕಡಿದ ಆರೋಪಿಯೊಬ್ಬನಿಗೆ ಒಂದು ವರ್ಷ ಜೈಲು, ದಂಡ ವಿಧಿಸಲಾಗಿದೆ. ಚೋರಡಿ ಗ್ರಾಮದ ಕರಡಿಬೆಟ್ಟದ ಮನ್ನಾ ಕಾಡಿನಲ್ಲಿ ಮರ ಕಡಿಯಲಾಗಿತ್ತು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಈ ಸಂಬಂಧ ಕಮ್ಮನಹಳ್ಳಿ ನಾಗರಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಶಿವಮೊಗ್ಗದ 2ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ, ಆರೋಪಿಗೆ ಒಂದು ವರ್ಷ ಸಾದಾ ಸಜೆ ಮತ್ತು 2 ಸಾವಿರ ರೂ. ದಂಡ ವಿಧಿಸಲಾಗಿದೆ. ಕರ್ನಾಟಕ ಅರಣ್ಯ ನಿಯಮದ ಉಲ್ಲಂಘನೆ ಕಾರಣಕ್ಕೆ ಮೂರು ತಿಂಗಳು ಸಾದಾ ಸಜೆ ಮತ್ತು 500 ರೂ ದಂಡ ವಿಧಿಸಲಾಗಿದೆ. ಅಲ್ಲದೆ ಸರ್ಕಾರಕ್ಕೆ ಪರಿಹಾರವಾಗಿ 10 ಸಾವಿರ ರೂ. ವಿಧಿಸಿ ತೀರ್ಪು ನೀಡಲಾಗಿದೆ.
ಏನಿದು ಕೇಸ್?
ಕರಡಿಬೆಟ್ಟದ ಮನ್ನಾ ಕಾಡಿಗೆ ನಾಗರಾಜ್ ಅಕ್ರಮವಾಗಿ ಪ್ರವೇಶಿಸಿ, ಸಾಗುವಾನಿ ಮರಗಳನ್ನು ಕಡಿದು, 37 ತುಂಡುಗಳಾಗಿ ಕತ್ತರಿಸಲಾಗಿದ್ದ ಎಂಬ ಆರೋಪವಿತ್ತು. ಈ ಸಂಬಂಧ ಆನಂದಪುರ ವಲಯ ಅರಣ್ಯಾಧಿಕಾರಿಗಳು ಪ್ರಕರಣ ದಾಖಲು ಮಾಡಿಕೊಂಡಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಎಸ್.ಅಂಜಲಿ ಶರ್ಮಾ ಅವರು ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಹೆಚ್.ಕೆ.ಅರುಣ್ ಕುಮಾರ್ ವಾದಿಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಶಿವಮೊಗ್ಗ ಲೈವ್.ಕಾಂ