ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜನ್ಮದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಡ ವೃದ್ಧರಿಗೆ ಸೀರೆ, ಬಟ್ಟೆ ಮತ್ತು ಹೊದಿಕೆ ವಿತರಿಸಿದರು.
ದುರ್ಗಿಗುಡಿಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮಠದ ಮುಂಭಾಗ ಕೂರುವ ಬಡ ವೃದ್ಧರಿಗೆ ಹೊದಿಕೆ, ಸೀರೆ ಮತ್ತು ಬಟ್ಟೆ ವಿತರಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ನಗರಾಧ್ಯಕ್ಷ ಹೆಚ್.ಪಿ.ಗಿರೀಶ್, ರಾಜ್ಯ ಕಾರ್ಯದರ್ಶಿ ಟಿ.ವಿ.ರಂಜಿತ್, ಕಿರಣ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]