ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 16 JUNE 2021
ಮಲೆನಾಡು ಭಾಗದಲ್ಲಿ ಮುಂಗಾರು ಬಿರುಸು ಪಡೆದುಕೊಳ್ಳುತ್ತಿದೆ. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಳವಾಗತ್ತಿದೆ.
ಇವತ್ತು ಬೆಳಗ್ಗೆ ಮಾಪನದಂತೆ ಭದ್ರಾ ಜಲಾಶಯಕ್ಕೆ 10,958 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ತುಂಗಾದಿಂದ ಹೊರ ಹರಿವು ಹೆಚ್ಚಳ
ಮತ್ತೊಂದೆಡೆ ತುಂಗಾ ಜಲಾಶಯಕ್ಕೆ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ಅಲ್ಲದೆ ಹಿನ್ನೀರು ಭಾಗದಲ್ಲಿ ಭಾರಿ ಮಳೆಯ ನಿರೀಕ್ಷೆ ಇರುವುದರಿಂದ ಗಾಜನೂರಿನ ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡಲು ಎಂಜಿನಿಯರ್ಗಳು ನಿರ್ಧರಿಸಿದ್ದಾರೆ.
ತುಂಗಾ ಜಲಾಶಯದಿಂದ 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]