SHIVAMOGGA LIVE NEWS |POLICE | 23 ಏಪ್ರಿಲ್ 2022
ರಾಜ್ಯಾದ್ಯಂತ ವಿವಿಧ ಪೊಲೀಸ್ ಠಾಣೆಗಳ ಇನ್ಸ್ ಪೆಕ್ಟರ್’ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಂದಲು ಇನ್ಸ್ ಪೆಕ್ಟರ್’ಗಳನ್ನು ವರ್ಗಾಯಿಸಲಾಗಿದೆ.
ಯಾರೆಲ್ಲರ ವರ್ಗಾವಣೆಯಾಗಿದೆ?
ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಚೈತನ್ನ ಅವರನ್ನು ಬೆಂಗಳೂರಿನ ಅಶೋಕನಗರದ ಠಾಣೆಗೆ ವರ್ಗಾಯಿಸಲಾಗಿದೆ.
ಹೊಸನಗರ ಠಾಣೆಯ ಇನ್ಸ್ ಪೆಕ್ಟರ್ ಮಧುಸೂದನ್ ಅವರನ್ನು ಬೆಂಗಳೂರಿನ ಸದಾಶಿವನಗರ ಠಾಣೆಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗ ಸಿಇನ್ ಠಾಣೆ ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಅವರನ್ನು ಕಡೂರು ಪಿಟಿಎಸ್’ಗೆ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಕ್ಲಬ್ ಮೇಲೆ ದಾಳಿ, ಕಾರ್ಪೊರೇಟರ್ ಪತಿ, ಮಾಜಿ ಕಾರ್ಪೊರೇಟರ್ ಸೇರಿ ಹಲವರು ವಶಕ್ಕೆ