ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 APRIL 2024
ANANDAPURA : ಕೆರೆ ಏರಿ ಮೇಲೆ ಜೆಸಿಬಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಸೈಯದ್ ಹುಸೇನ್ (34) ಮೃತರು. ಆನಂದಪುರದಿಂದ ಯಡೇಹಳ್ಳಿ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಕೆರೆ ಏರಿ ಮೇಲೆ ಬೈಕ್ ತೆರಳುತ್ತಿದ್ದಾಗ ಪಕ್ಕದ ಜಮೀನಿನಿಂದ ಜೆಸಿಬಿ ವಾಹನ ಏಕಾಏಕಿ ರಸ್ತೆಗೆ ಬಂದಿದೆ. ಈ ಸಂದರ್ಭ ಡಿಕ್ಕಿ ಸಂಭವಿಸಿ ಸೈಯದ್ ಹುಸೇನ್ ಗಂಭೀರ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇನ್ನು, ಮುಬಾರಕ್ ಎಂಬುವವರು ಗಾಯಗೊಂಡಿದ್ದು ಅವರಿಗೆ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ರಾತ್ರಿ ವಾಕಿಂಗ್ ತೆರಳಿದ್ದವರನ್ನು ಅಡ್ಡಗಟ್ಟಿದರು, ಬಿಯರ್ ಬಾಟಲಿಯಿಂದ ತಲೆಗೆ ಹೊಡೆದರು, ಇಬ್ಬರು ಆಸ್ಪತ್ರೆಗೆ ದಾಖಲು
ಶಿವಮೊಗ್ಗ ಲೈವ್.ಕಾಂ