ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟಂಬರ್ 2020
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆ, ಜೆಡಿಎಸ್ ಕಾರ್ಯಕರ್ತರು ಬೈಕ್ ರಾಲಿ ಮಾಡಿದರು.
ಶಿವಮೊಗ್ಗದ ವಿನೋಬನಗರ, ಲಕ್ಷ್ಮೀ ಟಾಕೀಸ್ ಸರ್ಕಲ್, ಜೈಲ್ ರೋಡ್, ನೆಹರೂ ರೋಡ್, ಗಾಂಧಿ ಬಜಾರ್, ಬಿ.ಹೆಚ್.ರಸ್ತೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬೈಕ್ ಜಾಥಾ ಮಾಡಿದರು. ಕಾರ್ಪೊರೇಟರ್ ನಾಗರಾಜ್ ಕಂಕಾರಿ, ನಗರಾಧ್ಯಕ್ಷ ಸಿದ್ಧಪ್ಪ, ಮಾಜಿ ಉಪ ಮೇಯರ್ ಪಾಲಾಕ್ಷಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಹಲವರು ಬೈಕ್ ಜಾಥಾ ಮಾಡಿದರು.
ಪೊಲೀಸರೊಂದಿಗೆ ಮಾತಿನ ಚಕಮಕಿ
ಲಕ್ಷ್ಮೀ ಟಾಕೀಸ್ ಸರ್ಕಲ್ ಬಳಿ ಜೆಡಿಎಸ್ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಲು ಯತ್ನಿಸಿದರು. ವೇಸ್ಟ್ ಬಟ್ಟೆಗಳನ್ನು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಮುಂದಾದರು. ಜೆಡಿಎಸ್ ಕಾರ್ಯಕರ್ತರ ಯತ್ನಕ್ಕೆ ಪೊಲೀಸರು ತಡೆಯೊಡ್ಡಿದರು. ಈ ವೇಳೆ ಪೊಲೀಸರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]