ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019
ಸುಪ್ರಿಂಕೋರ್ಟ್ ಆದೇಶ ಬುಡಕಟ್ಟು ಮತ್ತು ಆದಿವಾಸಿ ಹಾಗೂ ಬಗರ್’ಹುಕುಂ ಸಾಗುವಳಿ ಮಾಡುತ್ತಿರುವ ಬಡ ರೈತರ ಪಾಲಿಗೆ ಮರಣ ಶಾಸನವಾಗಿದೆ. ಕೇಂದ್ರ ಸರ್ಕಾರ ಈ ತೀರ್ಪಿನ ಬಗ್ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂಮಾಲೀಕತ್ವ ಸಾಬೀತು ಮಾಡಲು ವಿಫಲವಾದ ಹಿನ್ನೆಲೆಯಲ್ಲಿ ಸುಮಾರು 12 ಲಕ್ಷ ಅರಣ್ಯವಾಸಿ ಕುಟುಂಬಗಳನ್ನು ಕಾಡಿನಲ್ಲಿ ಒಕ್ಕಲೆಬ್ಬಿಸುವಂತೆ ಸುಪ್ರಿಂ ಕೋರ್ಟ್ ಆದೇಶ ನೀಡಿರುವುದು ಅತ್ಯಂತ ದುರಾದೃಷ್ಟಕರ ಸಂಗತಿ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರಮುಖರಾದ ಎಂ.ಶ್ರೀಕಾಂತ್, ಮಧು ಬಂಗಾರಪ್ಪ, ತ್ಯಾಗರಾಜ್, ನಾಗರಾಜ್ ಕಂಕಾರಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಮೊದಲಾದವರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ಶಿವಮೊಗ್ಗ ಲೈವ್.ಕಾಂ