ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಮುಖ್ಯಂಮತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಭೇಟಿ ನೀಡಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರ್ಷ ಕೊಲೆ ಹಿಂದೂ ಸಮಾಜಕ್ಕೆ ಆಘಾತ ತಂದಿದೆ. ಈ ಬೆಳವಣಿಗೆ ಯಾಕೆ ನಡೆಯುತ್ತಿವೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಅನ್ನುವುದು ನೋಡಬೇಕಿದೆ ಎಂದರು.
ಒಂದು ಲಕ್ಷದ ಚೆಕ್ ವಿತರಣೆ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅವರು ಹರ್ಷ ಕುಟುಂಬಕ್ಕೆ ಒಂದು ಲಕ್ಷ ರೂ. ಮೊತ್ತದ ಚೆಕ್ ವಿತರಣೆ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಹರ್ಷನ ಹತ್ಯೆಗೆ ಜಿಹಾದಿ ಸಂಘಟನೆಯ ಕೈವಾಡ ಇದೆ. ಅವರದೇ ಭಾಷೆಯಲ್ಲಿ ನಾವು ಉತ್ತರ ಕೊಡುವ ಕೆಲಸ ಮಾಡುತ್ತೇವೆ. ಹರ್ಷನ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇವೆ ಮಗನ ಸ್ಥಾನದಲ್ಲಿ ನಿಂತು ಕುಟುಂಬಕ್ಕೆ ನೆರವಾಗುತ್ತೇವೆ ಎಂದರು.