ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ನವೆಂಬರ್ 2021
ಆದಾಯಕ್ಕಿಂತಲೂ ಶೇ.400 ಪಟ್ಟು ಹೆಚ್ಚು ಆಸ್ತಿ ಸಂಪಾದಿಸಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪಗೆ ನ್ಯಾಯಾಂಗ ಬಂಧನವಾಗಿದೆ. ಡಿಸೆಂಬರ್ 7ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ರುದ್ರೇಶಪ್ಪನನ್ನು ಗುರುವಾರ ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಡಿ.7ರವರೆಗೆ ನ್ಯಾಯಾಂಗ ಬಂಧನ ವಿಧಿಸಿದರು. ಗುರುವಾರ ರುದ್ರೇಶಪ್ಪನ ವಿಚಾರಣೆ ನಡೆಸಿದ ಎಸಿಬಿ ಅಧಿಕಾರಿಗಳು ಹಲವು ಮಾಹಿತಿ ಸಂಗ್ರಹಿಸಿದ್ದರು. ಬ್ಯಾಂಕಿಗೆ ಕರೆದೊಯ್ದು ಲಾಕರ್’ಗಳಲ್ಲಿ ಪರಿಶೀಲನೆ ನಡೆಸಿದ್ದರು.