SHIVAMOGGA LIVE| 24 JUNE 2023
SORABA : ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ (Kanike Amount) ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು. ಚಂದ್ರಗುತ್ತಿ ನಾಡಕಚೇರಿ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಕಾಣಿಕೆ ಹುಂಡಿ ಹಣ ಏಣಿಕೆ ಕಾರ್ಯ ನಡೆಸಲಾಯಿತು.
ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 29,36,530 ರೂ. ಕಾಣಿಕೆ (Kanike Amount) ಸಂಗ್ರಹವಾಗಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಹುಂಡಿ ಹಣ ಎಣಿಸಿದಾಗ 41,23,920 ರೂ. ಸಂಗ್ರಹವಾಗಿತ್ತು ಕೇವಲ ಐದು ತಿಂಗಳಿನಲ್ಲಿ ದೇವಸ್ಥಾನದ ಗರಿಷ್ಠ ಮೊತ್ತ ಕಾಣಿಕೆ ಹಣ 70,60,450 ರೂ. ಸಂಗ್ರಹವಾಗಿದೆ. ಏಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿ.ಸಿ.ಕ್ಯಾಮೆರಾ ಅಳುವಡಿಸಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದ ಮೊದಲ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಟ್ಟಡ ರೆಡಿ, ಹೇಗಿದೆ? ಎಷ್ಟು ಕಾರ್, ಬೈಕ್ ನಿಲ್ಲಿಸಬಹುದು?
ಹುಂಡಿ ಹಣ ಎಣಿಕೆ ಕಾರ್ಯದಲ್ಲಿ ಮುಜರಾಯಿ ಇಲಾಖೆ ವಿಷಯ ನಿರ್ವಾಹಕರು , ತಾಲೂಕು ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು ಮತ್ತು ಚಂದ್ರಗುತ್ತಿ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿಗಳು, ಹಾಗೂ ದೇವಸ್ಥಾನದ ಸಿಬ್ಬಂದಿಗಳು ಸೇರಿದಂತೆ ಚಂದ್ರಗುತ್ತಿ ಆರಕ್ಷಕ ಠಾಣೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಕಾರ್ | ಮತ್ತಷ್ಟು ಸುದ್ದಿ | ಫಟಾಫಟ್ ನ್ಯೂಸ್
ಶ್ರೀ ರೇಣುಕಾಂಬ ದೇವಸ್ಥಾನದಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ ಸಂಗ್ರಹವಾಗುತ್ತಿದೆ. ಆದರೆ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಬೇಕಾಗುವ ಮೂಲ ಸೌಕರ್ಯ ಒದಗಿಸಲು ಸರ್ಕಾರವು ಮುಂದಾಗುತ್ತಿಲ್ಲ ಎಂಬುವುದು ಶ್ರೀ ರೇಣುಕಾಂಬ ದೇವಿ ಭಕ್ತರ ಪ್ರಶ್ನೆಯಾಗಿದೆ.