ಶಿವಮೊಗ್ಗ ಲೈವ್.ಕಾಂ | THIRTHAHALLI | 10 ಸೆಪ್ಟೆಂಬರ್ 2019
ನೆರೆಯಿಂದ ಹಾನಿಗೊಳಗಾಗಿರುವ ಮಲೆನಾಡು ಭಾಗದ ರೈತರಿಗೆ ಕರಾವಳಿ ಮಾದರಿಯಲ್ಲಿ ಪರಿಹಾರ ನೀಡಬೇಕು ಎಂದು ಕೃಷಿಕ ಸಮಾಜದ ಅಧ್ಯಕ್ಷ ಬಾಳೇಹಳ್ಳಿ ಪ್ರಭಾಕರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ಭಾಗದ ನೆರೆಪೀಡಿತ ರೈತರಿಗೆ ಕಡಿಮೆ ಪರಿಹಾರ ಸಿಗುತ್ತಿದೆ. ಹಾಗಾಗಿ ಕರಾವಳಿ ಮಾದರಿಯಲ್ಲಿ ಪರಿಹಾರ ವಿತರಿಸಬೇಕು. ಅಡಕೆ ತೋಟಕ್ಕೆ ನೀಡಲಾಗುತ್ತಿರುವ ಮೈಲುತುತ್ತ ಸಹಾಯಧನವನ್ನು ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.
ಕೃಷಿಕ ಸಮಾಜದ ಉಪಾಧ್ಯಕ್ಷ ಕಿಮ್ಮನೆ ಕೃಷ್ಣಮೂರ್ತಿ, ಖಜಾಂಚಿ ಹೆಚ್.ಎಸ್.ಮಹೇಶ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]