ಶಿವಮೊಗ್ಗ ಲೈವ್.ಕಾಂ | BANGALORE NEWS | 7 MAY 2021
ಕರ್ಫ್ಯೂ ಜಾರಿಯಲ್ಲಿದ್ದರೂ ಕರೋನ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ರಾಜ್ಯಾದ್ಯಂತ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮೇ 10ರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.
ಏನಿರುತ್ತೆ? ಏನಿರಲ್ಲ?
ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಹಾಲು ಮಾರಾಟಕ್ಕೆ ಅವಕಾಶ. ತಳ್ಳುವ ಗಾಡಿಯಲ್ಲಿ ತರಕಾರಿ ಮಾರಾಟಕ್ಕೆ ಅವಕಾಶವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಆಸ್ಪತ್ರೆಗಳಿಗೆ ತೆರಳಲು ಅವಕಾಶವಿದೆ. ಬಾರು, ಹೊಟೇಲ್ನಲ್ಲಿ ಪಾರ್ಸೆಲ್ಗೆ ಅವಕಾಶವಿದೆ. ಕಟ್ಟಡ ಕಾರ್ಮಿಕರಿಗೆ ಅವಕಾಶವಿದೆ. ಕೈಗಾರಿಕೆಗಳು ನಿಷೇಧವಿದೆ. ಅಂತರ್ ಜಿಲ್ಲಾ ಸಂಚಾರಕ್ಕೆ ನಿರ್ಬಂಧವಿದೆ.
ಇದು ಸರಿ ಕಾಣದೆ ಇದ್ದರೆ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಿದೆ. ಜನರು ಇದಕ್ಕೆ ಸಂಪೂರ್ಣ ಸಹಕಾರಿ ನೀಡಬೇಕು. ಸಂಪೂರ್ಣವಾದ ವಿವರನ್ನು ಇನ್ನಷ್ಟೆ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ತಿಳಿಸಿದರು.