SHIVAMOGGA LIVE NEWS | 22 APRIL 2024
THIRTHAHALLI : ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರಿ ಮೋದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು ನೀಡಿದ್ದಾರೆ. ತೀರ್ಥಹಳ್ಳಿಯಲ್ಲಿ ಸಹಾಯಕ ಚುನಾವಣ ಅಧಿಕಾರಿ ಮತ್ತು ಡಿವೈಎಸ್ಪಿ ಅವರಿಗೆ ದೂರು ಸಲ್ಲಿಸಿದ್ದಾರೆ.
ಕಿಮ್ಮನೆ ರತ್ನಾಕರ್ ಆರೋಪವೇನು?
‘ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮವರಿಗೆ ಕೊಡುತ್ತೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ. ಇದು ಕೋಮು ಭಾವನೆ ಕೆರಳಿಸುವ ಹೇಳಿಕೆ. ರಾಜ್ಯದ ಶಾಂತಿ, ಸುವ್ಯವಸ್ಥೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಧರ್ಮಗಳ ನಡುವೆ ದ್ವೇಷ ಹರಡಿ ಮತ ಗಳಿಸುವ ವ್ಯವಸ್ಥಿತ ಒಳ ಸಂಚು ಇದು. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೂರು ನೀಡಿದ್ದಾರೆ.
ಇದನ್ನೂ ಓದಿ – ‘ಶಿವಮೊಗ್ಗ ಜಿಲ್ಲೆಯಲ್ಲಿ 475 ಗ್ರಾಮಗಳಿಗೆ ಕಾದಿದೆ ಸಂಕಷ್ಟ, ಇದುವೇ ಮೋದಿ ಗ್ಯಾರಂಟಿʼ