SHIVAMOGGA LIVE NEWS | 28 ಫೆಬ್ರವರಿ 2022
ಬೈಕ್ ಒಂದರ ಸೀಟಿನ ಅಡಿ ಕುಳಿತು ಬುಸುಗುಡುತ್ತಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಗೋಂದಿ ಚಟ್ನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಸುರೇಶ್ ಎಂಬುವವರಿಗೆ ಸೇರಿದ ಸ್ಟಾರ್ ಸಿಟಿ ಬೈಕ್’ನ ಸೀಟ್ ಕೆಳಗೆ ನಾಗರ ಹಾವು ಸೇರಿಕೊಂಡಿತ್ತು. ಇದು ಗೊತ್ತಾಗುತ್ತಲೆ ಸುರೇಶ್ ಅವರು ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ ಅವರು ಬೈಕ್ ಸೀಟಿನ ಕೆಳಗೆ ಸೇರಿಕೊಂಡಿದ್ದ ನಾಗರ ಹಾವನ್ನು ರಕ್ಷಣೆ ಮಾಡಿದ್ದಾರೆ. 2 ಅಡಿ ಉದ್ದವಿದ್ದ ನಾಗರ ಹಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.