ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020
ಆಹಾರ ಅರಸುತ್ತ ದೇವಸ್ಥಾನದ ಆವರಣದಕ್ಕೆ ಬಂದಿದ್ದ ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ.
ಗಾಡಿಕೊಪ್ಪದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಆತಂಕಗೊಂಡ ಸ್ಥಳೀಯರು ಉರಗ ತಜ್ಞ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ತಿಳಿಸಿದ್ದರು. ಹೆಬ್ಬಾವನ್ನು ಹಿಡಿದ ಸ್ನೇಕ್ ಕಿರಣ್, ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.
ಹೆಬ್ಬಾವು ಸುಮಾರು 6.5 ಅಡಿ ಉದ್ದವಿತ್ತು. ಆಹಾರ ಅರಸಿಕೊಂಡು ದೇವಸ್ಥಾನದ ಆವರಣಕ್ಕೆ ಬಂದಿರುವ ಸಾದ್ಯತೆ ಇದೆ ಅನ್ನುತ್ತಾರೆ ಸ್ನೇಕ್ ಕಿರಣ್.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]