SHIVAMOGGA LIVE NEWS | 10 DECEMBER 2022
ಶಿವಮೊಗ್ಗ : ಗಂಡ, ಹೆಂಡತಿ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ (knief assault) ನಡೆಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ತಾಲೂಕಿನ ಪಿಳ್ಳಂಗೆರೆ ಗ್ರಾಮದ ಸತೀಶ್ ಎಂಬುವವರ ಮೇಲೆ ಅವರ ಸಹೋದರ ಶಿವಕುಮಾರ್ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ತನ್ನ ಪತ್ನಿ ಜೊತೆಗೆ ಡಿ.7ರ ರಾತ್ರಿ ಗಲಾಟೆ ಮಾಡುತ್ತಿದ್ದ. ಸತೀಶ್ ಅವರು ಗಲಾಟೆ ಬಿಡಿಸಿದ್ದಾರೆ. ಇಬ್ಬರು ಮನೆಗೆ ಹೋಗುವಂತೆ ಸೂಚಿಸಿದ್ದಾರೆ. ಆಗ ಶಿವಕುಮಾರ್ ಅವಾಚ್ಯವಾಗಿ ಬೈದಿದ್ದಾನೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮನೆಯ ಹಂಚು ತೆಗೆದು ಒಳ ನುಗ್ಗಿ 1200 ಉಂಗುರ ಕದ್ದ ಖದೀಮರು
ಸತೀಶ್ ಅವರು ಪಕ್ಕದ ಮನೆಯವರೊಂದಿಗೆ ಮಾತನಾಡುತ್ತ ನಿಂತಿದ್ದಾಗ ಶಿವಕುಮಾರ್ ಚಾಕುವಿನಿಂದ ಹಲ್ಲೆ (knief assault) ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಸತೀಶ್ ಅವರ ಬಲಭುಜದ ಹಿಂಭಾಗದಲ್ಲಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ ಸತೀಶ್ ದೂರು ನೀಡಿದ್ದಾರೆ.
ಗಾಯಗೊಂಡಿದ್ದ ಸತೀಶ್ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.