ಶಿವಮೊಗ್ಗ ಲೈವ್.ಕಾಂ | HOSANAGARA | 17 ಮಾರ್ಚ್ 2020
ಚಾರಣಿಗರು ಮತ್ತು ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಕೊಡಚಾದ್ರಿ ಮತ್ತು ಹಿಂಡ್ಲುಮನೆ ಫಾಲ್ಸ್ ಬಂದ್ ಮಾಡಲಾಗಿದೆ. ಮಾರ್ಚ್ 17ರಿಂದ ಪ್ರವಾಸಿಗರನ್ನು ನಿಷೇಧಿಸಿ ಕೊಲ್ಲೂರು ವಲಯ ಅರಣ್ಯ ತಿಳಿಸಿದೆ.
ಕೊಡಚಾದ್ರಿಯು ಪ್ರವಾಸಿ ಮತ್ತು ಧಾರ್ಮಿಕ ತಾಣವಾಗಿದೆ. ಹಾಗಾಗಿ ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಬೇಸಿಗೆ ರಜೆ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ಕೊರೋನ ಸೋಂಕು ಭೀತಿ ಹಿನ್ನೆಲೆ, ಕೊಡಚಾದ್ರಿಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ.
ಈ ನಡುವೆ ಹಿಂಡ್ಲುಮನೆ ಫಾಲ್ಸ್’ಗೂ ಪ್ರವಾಸಿಗರ ಸಂಖ್ಯೆ ಕುಸಿತ ಕಂಡಿದೆ. ಇಲ್ಲಿಗೂ ಪ್ರವಾಸಿಗರನ್ನು ನಿಷೇಧಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]