SHIVAMOGGA LIVE NEWS | 12 SEPTEMBER 2023
BHADRAVATHI : ಶುದ್ಧ ಕುಡಿಯುವ ನೀರು (Drinking Water) ಘಟಕದ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಪಕ್ಷದ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ
ಬಸವೇಶ್ವರ ವೃತ್ತದಲ್ಲಿ 2019 – 20ನೇ ಸಾಲಿನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಯಿತು. ಆದರೆ ನಿರ್ವಹಣೆ ಕೊರತೆಯಿಂದಾಗಿ ಘಟಕ ನಿರುಪಯುಕ್ತವಾಗಿದೆ. ಇದೆ ರೀತಿ ಹಲವು ಕಡೆ ಕುಡಿಯುವ ನೀರಿನ ಘಟಕಗಳು ನಿರ್ವಹಣೆ ಕೊರತೆ ಎದುರಿಸುತ್ತಿವೆ. ಈ ಹಿನ್ನೆಲೆ ನಿರ್ವಹಣೆ ಮಾಡಲು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಕೆಆರ್ಎಸ್ ಪಕ್ಷದ ಪ್ರಮುಖರಾದ ತೀರ್ಥ ಕುಮಾರ್, ಬಿ.ಎಸ್.ದಯಾನಂದ ಸೇರಿದಂತೆ ಇನ್ನಿತರರು ಇದ್ದರು.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ