ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಸೆಪ್ಟೆಂಬರ್ 2021
KSRTC ಚಾಲಕರೊಬ್ಬರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರಳಿಗೆ ಹೂವಿನ ಹಾರ ಹಾಕಿಕೊಂಡು, ನೇಣಿಗೆ ಶರಣಾಗಿದ್ದಾರೆ.
ಗಂಗಾಧರ್ (46), ಆತ್ಮಹತ್ಯೆ ಮಾಡಿಕೊಂಡವರು. ಭದ್ರಾವತಿಯ ಹೊಸಸಿದ್ಧಾಪುರದಲ್ಲಿ ಘಟನೆ ಸಂಭವಿಸಿದೆ.
ಹೊಸಸಿದ್ಧಾಪುರದ ತಮ್ಮ ಮನೆಯ ಮಹಡಿಯ ಕೊಠಡಿಯಲ್ಲಿ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಗಂಗಾಧರ್ ನೇಣು ಬಿಗಿದುಕೊಳ್ಳುವ ಮುನ್ನ ಹೊಸ ಬಟ್ಟೆ ಧರಿಸಿ, ಕೊರಳಿಗೆ ಹೂವಿನ ಹಾರವನ್ನು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆ ಈ ನಿರ್ಧಾರ ಕೈಗೊಂಡಿರುವ ಬಗ್ಗೆ ಶಂಕೆ ಇದೆ. ನ್ಯೂ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200