SHIVAMOGGA LIVE | 1 AUGUST 2023
TALAGUPPA : ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ (KSRTC BUS) ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.
ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರು ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಶಿರಸಿ – ಸಾಗರ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಎದುರಿನಿಂದ ವೇಗವಾಗಿ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕ ಎಡಗಡೆಗೆ ಬಸ್ ತಿರುಗಿಸಿದ್ದಾರೆ. ಇದರಿಂದ ಬಸ್ ಹೊಂಡಕ್ಕೆ ಜಾರಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ನಡುರಾತ್ರಿ ಉಪನ್ಯಾಸಕನ ಮನೆಗೆ ನುಗ್ಗಲು ಯತ್ನಿಸಿದ ಯುವಕರ ಗುಂಪು, ಯುವತಿಗಾಗಿ ಶೋಧ, ಆಗಿದ್ದೇನು?
ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.