ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020
ನೌಕರರ ಮುಷ್ಕರದ ಹಿನ್ನೆಲೆ ಶಿವಮೊಗ್ಗದಲ್ಲೂ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತವಾಗಿದೆ. ಮುಷ್ಕರದ ಎರಡನೇ ದಿನ ಬೆರಳೆಣಿಕೆಯಷ್ಟು ಬಸ್ಸುಗಳು ಮಾತ್ರ ನಿಲ್ದಾಣದಲ್ಲಿ ಇದ್ದವು.
ಸಾರಿಗೆ ಇಲಾಖೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಇವತ್ತು ಬೆರಳೆಣಿಕೆಯಷ್ಟು ಬಸ್ಸುಗಳು ಮಾತ್ರ ಇದ್ದವು. ಸಿಬ್ಬಂದಿಗಳ ಸಂಖ್ಯೆಯು ಕಡಿಮೆ ಇತ್ತು. ಕೆಲವು ಪ್ರಯಾಣಿಕರು ನಿಲ್ದಾಣದವರೆಗೆ ಬಂದು ಬಸ್ ಸಂಚರಿಸುತ್ತಿವೆಯೋ ಇಲ್ಲವೋ ಎಂದು ಪರಿಶೀಲನೆ ನಡೆಸಿದರು.
ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]