ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಡಿಸೆಂಬರ್ 2021
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಖಂಡಿಸಿ ಶಿವಮೊಗ್ಗದಲ್ಲಿ ಜಿಲ್ಲಾ ಯುವ ಕುರುಬರ ಬಳಗ ಪ್ರತಿಭಟನೆ ನಡೆಸಿತು. ಎಂಇಎಸ್ ಗೂಂಡಾಗಳನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ದೇಶಪ್ರೇಮಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಲಾಗಿದೆ. ನಾಲ್ಕು ದಿನದ ಹಿಂದೆ ಕರ್ನಾಟಕದ ಧ್ವಜ ಸುಡಲಾಗಿತ್ತು. ಇಷ್ಟಾದರೂ ಎಂಇಎಸ್ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿದೆ. ಧ್ವಜ ಸುಟ್ಟ ಪ್ರಕರಣ ಸಂಬಂಧ ಹೋರಾಟ ನಡೆಸಿದ ಕನ್ನಡಿಗರ ವಿರುದ್ಧವೇ ಕೇಸ್ ಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಮಾಜಿ ಉಪಮೇಯರ್ ಪಾಲಾಕ್ಷಿ ಅವರು, ನಾಲ್ಕು ದಿನದ ಹಿಂದೆ ಕರ್ನಾಟಕದ ಧ್ವಜ ಸುಟ್ಟಿದ್ದಾರೆ. ಈಗ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ್ದಾರೆ. ಎಂಇಎಸ್ ಅನ್ನುವುದು ದೇಶದ್ರೋಹಿ ಸಂಘಟನೆಯಾಗಿದೆ. ಇದನ್ನ ಕೂಡಲೆ ನಿಷೇಧ ಮಾಡಬೇಕು. ಈ ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.