ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021
ಶಿವಮೊಗ್ಗ ನಗರದಲ್ಲಿ ನಾಲ್ಕು ದಿನದ ಕಠಿಣ ಲಾಕ್ ಡೌನ್ನಲ್ಲಿ ಕೆಲವು ಮಾರ್ಪಾಡುಗಳಾಗಿವೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ರಕ್ಷಣಾ ಇಲಾಖೆ, ರೈಲ್ವೆ, ಆಹಾರ ಸಂಸ್ಕಾರಣೆ, ಔಷಧ ಉತ್ಪಾದನೆ ಸಂಬಂಧದ ಕಾರ್ಖಾನೆಗಳಿಗೆ ವಿನಾಯಿತಿ ನೀಡಲಾಗಿದೆ. ಶಿವಮೊಗ್ಗದಲ್ಲಿ ಈ ಸಂಬಂಧ ಉತ್ಪಾದನೆಯಲ್ಲಿ ತೊಡಗಿರುವ ಕಾರ್ಖಾನೆಗಳ ಕಾರ್ಯನಿರ್ವಹಣೆಗೆ ಅವಕಾಶವಿದೆ ಎಂದು ತಿಳಿಸಿದರು.
ಇಂತಹ ಕೈಗಾರಿಕೆಗಳ ಕಾರ್ಮಿಕರಿಗೆ ಪಾಸ್ ವ್ಯವಸ್ಥೆಯನ್ನು ಕೂಡ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ವಿವಾದಕ್ಕೆ ಕಾರಣವಾಗಿದ್ದ ನಿರ್ಧಾರ
ಏಕಾಏಕಿ ಕೈಗಾರಿಕೆಗಳನ್ನು ನಿಲ್ಲಿಸುವ ಕುರಿತು ಸಚಿವ ಈಶ್ವರಪ್ಪ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಸ್ವಪಕ್ಷೀಯ ಶಾಸಕ, ಉದ್ಯಮಿ ರುದ್ರೇಗೌಡ ಅವರೆ ಇದನ್ನು ಖಂಡಿಸಿದ್ದರು. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದರು. ವಿದೇಶಕ್ಕೆ ರಫ್ತು ಮಾಡುವುದು, ರಕ್ಷಣಾ ಇಲಾಖೆಗಾಗಿ ಉತ್ಪಾದನೆ ಮಾಡವವರಿಗೆ ಲಾಕ್ ಡೌನ್ ನಿರ್ಧಾರದಿಂದ ಭಾರಿ ಹೊಡೆತ ಬೀಳಲಿದೆ. ಇದರಿಂದ ಸಾವಿರಾರು ಕಾರ್ಮಿಕರಿಗೆ ತೊಂದರೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಸಚಿವ ಈಶ್ವರಪ್ಪ ಅವರ ಹೇಳಿಕೆಯ ವಿಡಿಯೋ ಇಲ್ಲಿದೆ.
ಈ ಹಿನ್ನೆಲೆಯಲ್ಲಿ ಇವತ್ತು ಸಚಿವ ಈಶ್ವರಪ್ಪ ಅವರು ಲಾಕ್ ಡೌನ ನಿರ್ಧಾರದಲ್ಲಿ ಕೆಲವು ಬದಲಾವಣೆ ಮಾಡಿದರು. ಇದಕ್ಕೆ ಶಾಸಕ ರುದ್ರೇಗೌಡ ಅವರು ಸಮ್ಮತಿ ಸೂಚಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]