SHIVAMOGGA LIVE NEWS | 11 APRIL 2023
SHIMOGA : ಲಂಚ ಪಡೆಯುತ್ತಿದ್ದ ವೇಳೆ ಮಹಾನಗರ ಪಾಲಿಕೆ ರೆವಿನ್ಯೂ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರೆವಿನ್ಯೂ ಇನ್ಸ್ಪೆಕ್ಟರ್ ಮಂಜುನಾಥ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಅಧಿಕಾರಿ. ಕಟ್ಟಡ ನಿರ್ಮಾಣಕ್ಕೆ ವ್ಯಕ್ತಿಯೊಬ್ಬರಿಗೆ ಎನ್ಒಸಿ ಕೊಡಲು ಮಂಜುನಾಥ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇವತ್ತು ಐದು ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಹೊಳೆ ಬಸ್ ಸ್ಟಾಪ್ ಬಳಿ ದಿಢೀರ್ ಪ್ರತಿಭಟನೆ, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ
ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.