ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | LOKAYUKTHA | 4 ಜೂನ್ 2022
ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕುಂದು, ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಯಾವ್ಯಾವ ದಿನಾಂಕದಲ್ಲಿ ಎಲ್ಲೆಲ್ಲಿ ಸಭೆ?
ಜೂನ್ 6ರಂದು ಭದ್ರಾವತಿಯ ಮಿಲಿಟರಿ ಕ್ಯಾಂಪ್ನಲ್ಲಿರುವ ಪ್ರವಾಸಿ ಮಂದಿರದಲ್ಲಿ, ಜೂ.14ರಂದು ಸಾಗರ ಪ್ರವಾಸಿ ಮಂದಿರದಲ್ಲಿ, ಜೂ.16 ರಂದು ತೀರ್ಥಹಳ್ಳಿ ಪ್ರವಾಸಿ ಮಂದಿರದಲ್ಲಿ, ಜೂ.21 ರಂದು ಸೊರಬ ಪ್ರವಾಸಿ ಮಂದಿರದಲ್ಲಿ, ಜೂ.22 ರಂದು ಹೊಸನಗರದ ಪ್ರವಾಸಿ ಮಂದಿರದಲ್ಲಿ ಹಾಗೂ ಜೂ.28 ರಂದು ಶಿಕಾರಿಪುರ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಭೆ ನಡೆಯಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ವಿಳಂಬ ಮತ್ತು ನಿರ್ಲಕ್ಷ್ಯ ತೋರಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಶಿವಮೊಗ್ಗ ಲೈವ್.ಕಾಂ