SHIVAMOGGA LIVE NEWS | 6 ಮಾರ್ಚ್ 2022
ಲಾರಿ ಕಳ್ಳತನ ಮಾಡಿ ತೆಗೆದುಕೊಂಡು ಹೋಗುತ್ತಿದ್ದ ಕಳ್ಳರನ್ನು ಬೆನ್ನಟ್ಟಿ ಸಿನಿಮೀಯ ಶೈಲಿಯಲ್ಲಿ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಒಬ್ಬನನ್ನು ಬಂಧಿಸಲಾಗಿದ್ದು, ಮೂವರು ಪರಾರಿಯಾಗಿದ್ದಾರೆ.
ಬಂಧಿತನನ್ನು ನ್ಯಾಮತಿಯ ಕರಿಬಸಪ್ಪ ಎಂದು ಗುರುತಿಸಲಾಗಿದೆ. ಹಾಲೇಶ್, ಮಂಜು, ಗೌಸ್ ಪೀರ್ ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ.
ಏನಿದು ಘಟನೆ?
ಸಾಗರದ ಮಲಂದೂರು ಗ್ರಾಮದ ಇಬ್ರಾಹಿಂ ಎಂಬುವವರಿಗೆ ಸೇರಿದ ಲಾರಿಯನ್ನು ಮಧ್ಯರಾತ್ರಿ ಕಳ್ಳತನ ಮಾಡಲಾಗಿತ್ತು. ಕದ್ದ ಲಾರಿ ಕುಂಸಿ – ಹಾರ್ನಹಳ್ಳಿ ನಡುವೆ ಸಂಚರಿಸುತ್ತಿತ್ತು. ಸಂಬಂಧಿಕರ ಮನೆಗೆ ಬಂದಿದ್ದ ಮಲಂದೂರಿನ ಒಬ್ಬರು ಲಾರಿಯನ್ನು ಗಮನಿಸಿ, ಇಬ್ರಾಹಿಂ ಅವರಿಗೆ ಕರೆ ಮಾಡಿದ್ದಾರೆ. ಆಗ ಕಳ್ಳತನದ ವಿಚಾರ ಬಯಲಾಗಿದೆ.
ಲಾರಿಯನ್ನು ಅಡ್ಡಗಟ್ಟಿದರು
ಕಳ್ಳತನ ಆಗಿರುವ ವಿಚಾರ ತಿಳಿಯುತ್ತಿದ್ದ ಹಾಗೆ ಮಲಂದೂರಿನ ಕೆಲವರು ಹಾರ್ನಹಳ್ಳಿಗೆ ಬಂದಿದ್ದಾರೆ. ಲಾರಿಯನ್ನು ಅಡ್ಡಗಟ್ಟಿದ್ದಾರೆ. ಸಿಕ್ಕಿಬೀಳುವ ಭೀತಿಯಲ್ಲಿ ನಾಲ್ವರು ಕಳ್ಳರು ಲಾರಿಯಿಂದ ಹಾರಿ ಪರಾರಿಯಾಗಲು ಯತ್ನಿಸಿದ್ದಾರೆ.
ಈ ಸಂದರ್ಭ ನ್ಯಾಮತಿಯ ಕರಿಬಸಪ್ಪ ಸಿಕ್ಕಿಬಿದ್ದಿದ್ದಾನೆ. ಕೂಡಲೆ ಆತನನ್ನು ಆನಂದಪುರದ ಉಪ ಠಾಣೆಯ ಪೊಲೀಸರಿಗೆ ಒಪ್ಪಿಸಲಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200