ಶಿವಮೊಗ್ಗ ಲೈವ್.ಕಾಂ | BHADRAVATHI | 23 ಸೆಪ್ಟೆಂಬರ್ 2020
ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ನಿವಾಸಕ್ಕೆ ಮಾಜಿ ಶಾಸಕ ಮಧು ಬಂಗಾರಪ್ಪ ಇವತ್ತು ಭೇಟಿ ನೀಡಿ ಸಾಂತ್ವನ ಹೇಳಿದರು.
ಭದ್ರಾವತಿಯಲ್ಲಿ ಅಪ್ಪಾಜಿಗೌಡ ಅವರ ಮನೆಗೆ ಮಧು ಬಂಗಾರಪ್ಪ ಭೇಟಿ ನೀಡಿದರು. ಅಪ್ಪಾಜಿಗೌಡರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಅಪ್ಪಾಜಿಗೌಡ ಅವರ ಪತ್ನಿ ಶಾರಾದಾ, ಮಗ ಅಜಿತ್ಗೌಡ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.ಜಿ
ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್, ಭದ್ರಾವತಿ ಜೆಡಿಎಸ್ ಅಧ್ಯಕ್ಷ ಕರುಣಾ ಮೂರ್ತಿ ,ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಜಿ.ಡಿ .ಮಂಜುನಾಥ್, ಲಕ್ಕವಳ್ಳಿ ಎಂ.ಆರ್ .ರಮೇಶ್ ಹಾಗೂ ರಾಜ್ ಕುಮಾರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.