SHIVAMOGGA LIVE NEWS | 29 ಮಾರ್ಚ್ 2022
ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಪಿಎಸ್ಐ ಆಗಿದ್ದ ಜಯಪ್ಪ ನಾಯ್ಕ್ ಅವರನ್ನು ದಿಢೀರ್ ವರ್ಗಾಯಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ ಕುಂಸಿ ಪಿಎಸ್ಐ ನವೀನ್ ಮಠಪತಿ ಅವರನ್ನು ನಿಯೋಜಿಸಲಾಗಿದೆ.
ವರ್ಗಕ್ಕೆ ಕಾರಣವಾಯ್ತಾ ಆಡಿಯೋ?
ಮರಳು ಲಾರಿ ಮಾಲೀಕರು, ಚಾಲಕರು ಪಿಎಸ್ಐ ಜಯಪ್ಪ ನಾಯ್ಕ್ ಅವರ ವಿರುದ್ಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದರು. ಈಚೆಗೆ ಜಯಪ್ಪ ನಾಯ್ಕ್ ಅವರದ್ದು ಎನ್ನಲಾದ ಫೋನ್ ಸಂಭಾಷಣೆಯೊಂದು ವೈರಲ್ ಆಗಿತ್ತು. ಇದರ ಬೆನ್ನಿಗೆ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200