ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021
ಭಾರಿ ಮಳೆಯಿಂದ ಶಿವಮೊಗ್ಗ ನಗರದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ. ಮೇಯರ್ ನೇತೃತ್ವದ ತಂಡ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಇವೆಲ್ಲದರ ಪರಿಶೀಲನೆ ನಡೆಸಿದ ಮೇಯರ್, ತುರ್ತು ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಲವು ಬಡಾವಣೆಗಳ ಚರಂಡಿ ತುಂಬಿ ರಸ್ತೆಯ ಮೇಲೆ ನೀರು ನಿಂತಿದೆ. ಹಾಗಾಗಿ ಚರಂಡಿಗಳನ್ನು ಕ್ಲೀನ್ ಮಾಡಿ, ನೀರು ಹರಿಯಲು ಅವಕಾಶ ಕಲ್ಪಿಸಬೇಕು. ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಂಭವವಿದೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮೇಯರ್ ಸುನೀತಾ ಅಣ್ಣಪ್ಪ ಸೂಚಿಸಿದರು.
ಉಪ ಮೇಯರ್ ಶಂಕರ್ ಗನ್ನಿ, ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]