ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜೂನ್ 2020
ಹೊರ ರಾಜ್ಯದಿಂದ ಬರುವವರಿಗೆ ಜಿಲ್ಲೆಯ ಹೊರ ಭಾಗದಲ್ಲೇ ತಪಾಸಣೆ ನಡೆಸಿ ಒಳ ಬಿಡಬೇಕು ಎಂದು ಒತ್ತಾಯಿಸಿ ರಕ್ಷಣಾ ಫೌಂಡೇಶನ್ ಸಂಸ್ಥೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಮಹಾರಾಷ್ಟ್ರದಿಂದ ಶಿವಮೊಗ್ಗ ಜಿಲ್ಲೆಗೆ ಬರುವವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಇವರಲ್ಲಿ ಕರೋನ ಶಂಕೆ ಹೆಚ್ಚಿದೆ. ಸದ್ಯದಲ್ಲೇ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ನಡೆಯಲಿದೆ. ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಬಂದರೆ ವಿದ್ಯಾರ್ಥಿಗಳಿಗೂ ತೊಂದರೆ ಆಗಲಿದೆ. ಹಾಗಾಗಿ ಈ ಕುರಿತು ಪರಿಶೀಲನೆ ಅಗತ್ಯ ಎಂದು ಒತ್ತಾಯಿಸಿದರು.
ಸಂಸ್ಥೆಯ ವಾಣಿ ಗೌಡ, ಶರವಣ, ಸುನೀತಾ, ಲಕ್ಷ್ಮಿ ನಾಗೇಶ್, ಸುಮತಿ, ಮೂರ್ತಿ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]