ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್ನ ಅಧ್ಯಕ್ಷ ಸ್ಥಾನಕ್ಕೆ ಆರ್.ಎಂ.ಮಂಜುನಾಥಗೌಡ ರಾಜೀನಾಮೆ ನೀಡಬಾರದು ಅಂತಾ ಹೊಸನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಮುಖರು ಇವತ್ತು ಮನವಿ ಸಲ್ಲಿಸಿದರು.
ಆರ್.ಎಂ.ಮಂಜುನಾಥಗೌಡ ಅವರನ್ನು ಭೇಟಿಯಾಗಿ ಈ ಸಂಬಂಧ ಮನವಿ ಸಲ್ಲಿಸಿದರು. ಮಂಜುನಾಥಗೌಡ ಅವರು ಡಿಸಿಸಿ ಬ್ಯಾಂಕ್ನ ಅಧ್ಯಕ್ಷ ಹುದ್ದೆಗೆ ಯಾವುದೆ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದರು.
ಮಂಜುನಾಥಗೌಡ ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದ ವೇಳೆ ಸಹಕಾರ ಕ್ಷೇತ್ರಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಹಾಗಾಗಿ ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕು. ಮಂಜುನಾಥಗೌಡ ಅವರಿಗೆ ಸದಾ ಬೆಂಬಲವಾಗಿ ಇರುತ್ತೇವೆ ಎಂದು ಒತ್ತಾಯಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]