SHIVAMOGGA LIVE NEWS | 6 SEPTEMBER 2023
HOLEHONNURU : ಶಿವಮೊಗ್ಗ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಇಂದು ಹೊಳೆಹೊನ್ನೂರು ಹೋಬಳಿ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿದರು.
ಸಕಾಲ ಆ್ಯಪ್, ಪೆನ್ಶನ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಪ ತಹಶೀಲ್ದಾರ್ ಹಾಗೂ ಗ್ರಾಮಲೆಕ್ಕಿಗರಿಂದ ಮಾಹಿತಿ ಪಡೆದರು. ಈ ಸಂದರ್ಭ ಗ್ರಾಮ ಲೆಕ್ಕಿಗರಿಗೆ ಸೂಕ್ತ ತರಬೇತಿ, ಸಮರ್ಪಕ ಮಾಹಿತಿ ಇಲ್ಲದಿರುವುದು ಗೊತ್ತಾಗಿದೆ. ಸೂಕ್ತ ತರಬೇತಿ ನೀಡದಿರುವುದರ ಬಗ್ಗೆ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಹಲವು ಅಧಿಕಾರಿಗಳು ಈ ವೇಳೆ ಇದ್ದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಪ್ರೈವೇಟ್ ಜೆಟ್, ಬೆಂಗಳೂರಿನಿಂದ 39 ನಿಮಿಷ, ಇಲ್ಲಿಂದ ಮೈಸೂರಿಗೆ 25 ನಿಮಿಷದಲ್ಲಿ ಹಾರಾಟ