ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜೂನ್ 2020
ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರ ಶಿವಮೊಗ್ಗ ಜಿಲ್ಲಾ ಪ್ರವಾಸ ಕೊನೆ ಕ್ಷಣದಲ್ಲಿ ರದ್ದಾಗಿದೆ. ಅನಿವಾರ್ಯ ಕಾರಣದಿಂದ ಪ್ರವಾಸ ರದ್ದಗೊಳಿಸಲಾಗಿದೆ ಎಂದು ಅವರ ಆಪ್ತ ಸಹಾಯಕರು ತಿಳಿಸಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಸಚಿವ ಸುಧಾಕರ್ ಅವರು ಇವತ್ತು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಮ್ಸ್) ಪ್ರಗತಿ ಪರಿಶೀಲನೆ ಸಭೆ ನಡೆಸಲು ಯೋಜಿಸಿದ್ದರು. ಆದರೆ ದಿಢೀರ್ ಅಂತಾ ಪ್ರವಾಸ ರದ್ದಗೊಳಿಸಲಾಗಿದೆ.
ಮಿನಿಸ್ಟರ್ ಕುಟುಂಬದವರಿಗೆ ಕರೋನ
ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರ ತಂದೆ, ಪತ್ನಿ ಮತ್ತು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದೇ ಕಾರಣಕ್ಕೆ ಸುಧಾಕರ್ ಅವರು ಪ್ರವಾಸ ರದ್ದು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]