ಶಿವಮೊಗ್ಗ ಲೈವ್.ಕಾಂ | THIRTHAHALLI | 20 ಅಕ್ಟೋಬರ್ 2019
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತೀರ್ಥಹಳ್ಳಿಯ ದೇವಂಗಿ ಬಳಿ ಸಂಜೆ ಘಟನೆ ನಡೆದಿದೆ. ಇದೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಶಾಸಕ ಆರಗ ಜ್ಞಾನೇಂದ್ರ ಅವರು ಗಾಯಾಳುಗಳನ್ನು ಸಂತೈಸಿದ್ದಾರೆ. ಬಳಿಕ ತಮ್ಮ ಮತ್ತು ತಮ್ಮ ಬೆಂಬಲಿಗರ ಕಾರಿನಲ್ಲಿ ಗಾಯಾಳುಗಳನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಗಂಭೀರ ಗಾಯಗೊಂಡಿರುವ ಕೊಪ್ಪ ತಾಲೂಕಿನ ಚಂದ್ರಪ್ಪ ಮತ್ತು ಸುದಾನಂದ ಎಂಬುವವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಸಕ ಆರಗ ಜ್ಞಾನೇಂದ್ರ ಅವರ ಕಾರ್ಯ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]