SHIVAMOGGA LIVE NEWS | 25 ಮಾರ್ಚ್ 2022
ರೈಲ್ವೆ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಕಳ್ಳತನವಾಗಿದೆ. ಬೈಕಿನಲ್ಲಿ ಬಂದ ಇಬ್ಬರು ಆರೋಪಿಗಳು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಚೇತನ್ ನಾಯ್ಕ ಎಂಬುವವರಿಗೆ ಸೇರಿದ ಮೊಬೈಲ್ ಕಳ್ಳತನವಾಗಿದೆ. ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ ತೆರಳಬೇಕಿತ್ತು. ಈ ಹಿನ್ನೆಲೆಯಲ್ಲಿ ಚೇತನ್ ನಾಯ್ಕ ಅವರು ಉಷಾ ನರ್ಸಿಂಗ್ ಹೋಮ್ ಕಡೆಯಿಂದ ಮೊಬೈಲ್ ಫೋನ್’ನಲ್ಲಿ ಮಾತನಾಡಿಕೊಂಡು ರೈಲ್ವೆ ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದರು.
ಹಿಂಬದಿಯಿಂದ ಬೈಕಿನಲ್ಲಿ ಬಂದ ಇಬ್ಬರು ಚೇತನ್ ನಾಯ್ಕ ಅವರ ಮೊಬೈಲ್ ಫೋನ್ ಕಸಿದುಕೊಂಡು ರೈಲ್ವೆ ನಿಲ್ದಾಣದ ಕಡೆಗೆ ವೇಗವಾಗಿ ಹೋಗಿದ್ದಾರೆ. 25 ಸಾವಿರ ಮೌಲ್ಯದ ಒನ್ ಪ್ಲಸ್ ಮೊಬೈಲ್ ಕಳುವಾಗಿದೆ.
ಘಟನೆ ಸಂಬಂಧ ಜಯನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200