ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 31 ಡಿಸೆಂಬರ್ 2021
ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ ಮೊಬೈಲ್ ಫೋನ್’ಗಳನ್ನು ಭದ್ರಾವತಿಯಲ್ಲಿ ಹಂಚಿಕೊಳ್ಳುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಬ್ಬನನ್ನು ಬಂಧಿಸಲಾಗಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.
ಭದ್ರಾವತಿ ಆನ್ವರ್ ಕಾಲೋನಿಯ ಸೈಯದ್ ಅಲ್ವಿ (25) ಬಂಧಿತ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಕದ್ದ ಮೊಬೈಲ್’ಗಳನ್ನು ಮೂವರು ಹಂಚಿಕೊಳ್ಳುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿದ್ದಾರೆ.
ರಾಶಿ ರಾಶಿ ಮೊಬೈಲ್’ಗಳು
ಪ್ರೊಬೆಷನರಿ ಡಿವೈಎಸ್’ಪಿ ಗಜಾನನ ಸತಾರ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭ, ಸಂತೆ ಮೈದಾನದಲ್ಲಿ ದಾಳಿ ನಡೆಸಿದ್ದಾರೆ.
ಬಂಧಿತ ಸೈಯದ್ ಅಲ್ವಿಯಿಂದ ವಿವಿಧ ಕಂಪನಿಯ 55 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯ 6,68,400 ರೂ. ಎಂದು ಅಂದಾಜು ಮಾಡಲಾಗಿದೆ. ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಮೊಬೈಲ್ ಫೋನ್’ಗಳನ್ನು ಕಳವು ಮಾಡಿ ತರಲಾಗಿದೆ.
ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತಿಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.